ಯಲಹಂಕ :
ಬೈಕ್ ಮತ್ತು ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವರನ ತಲೆಯ ಭಾಗ ಚಿದ್ರವಾಗಿದೆ..
ಪ್ರೆಸಿಡೆನ್ಸಿ ಕಾಲೇಜಿನ ಮುಂಭಾಗದಲ್ಲಿ ಘಟನೆ ನಡೆದಿದು ರಾಜನುಕುಂಟೆಯಿಂದ ಬರ್ತಿದ್ದ ಕ್ಯಾಂಟರ್ ಗೆ ದಿಬ್ಬೂರು ಕಡೆಯಿಂದ ಬಂದಂತಹ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ
ಬೈಕ್ ಸವಾರ ಮೌನೀಶ್ ಮಂದಣ್ಣ ಕೊಡಗು ಮೂಲಕ ವ್ಯಕ್ತಿ ಬೆಂಗಳೂರಿನಲ್ಲಿ ವಾಸವಾಗಿದ್ದು ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಫೈನಲ್ ಇಯರ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು ಇಂದು ಕೊನೆಯ ಪರೀಕ್ಷೆಯನ್ನು ಬರೆದು ಸ್ನೇಹಿತನ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಜವರಾಯನ ಅಟ್ಟಹಾಸಕ್ಕೆ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನು ವಿಷಯ ತಿಳಿದಿದ್ದಂತೆ ಸ್ಥಳಕ್ಕೆ ಬಂದ ರಾಜನುಕುಂಟೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ...
Comments