ಇಟ್ಟಿಗೆ ಟ್ರ್ಯಾಕ್ಟರ್ ಮತ್ತು ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಭೀಕರ ಅಪಘಾತ..!!
ದೇವನಹಳ್ಳಿ : ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ಹಾದು ಹೋಗಿರುವ ದಾಬಸ್ ಪೇಟೆ- ಹೊಸಕೋಟೆ ಹೆದ್ದಾರಿಯಲ್ಲಿ ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಮತ್ತು ಗ್ಯಾಸ್ ಸಿಲಿಂಡರ್ ತುಂಬಿದ್ದಲಾರಿ ನಡುವೆ ಅಪಘಾತ ಸಂಭವಿಸಿದೆ.
ಸಂಜೆ 4.30ಕ್ಕೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ಮೂವರು ಕಾರ್ಮಿಕರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Comments