ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ...!!
ಕಿನ್ನಿಗೋಳಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ಎಂಬಲ್ಲಿ ವಿದ್ಯಾರ್ಥಿನಿಯೊಬ್ಬಳು ನಿನ್ನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ವಿದ್ಯಾರ್ಥಿನಿಯನ್ನು ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ ( 21) ಎಂದು ತಿಳಿಯಲಾಗಿದೆ.
ಮೃತ ಜೆಸ್ಲಿಟಾ ಸೆರಾವೋ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿಗ್ರಿ ಅಂತಿಮ ವರ್ಷದ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮಂಗಳವಾರ ಕಾಲೇಜಿಗೆ ರಜೆ ಮಾಡಿ ಮನೆಯಲ್ಲಿದ್ದರು. ಬೆಳಗಿನ ಜಾವ ಹೆತ್ತವರು ಪಕ್ಷಿಕೆರೆ ಚರ್ಚ್ಗೆ ಪ್ರಾರ್ಥನೆಗೆ ಹೋದ ಸಮಯದಲ್ಲಿ ಈಕೆ ತನ್ನ ಕೋಣೆಯ ಫ್ಯಾನ್ ಗೆ ಚೂಡಿದಾರ್ ಶಾಲ್ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಮನೆಯವರು ಚರ್ಚ್ನಿಂದ ವಾಪಸ್ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬಯಲಿಗೆ ಬಂದಿದ್ದು, ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೃತರು ತಂದೆ ತಾಯಿ ಮತ್ತು ಅಣ್ಣನನ್ನು ಅಗಲಿದ್ದಾರೆ.
Comments